ಸಿದ್ದರಾಮಯ್ಯ ಟಗರು ಇದ್ದಂಗೆ, ಹೆದರುವ ಪ್ರಶ್ನೆಯೇ ಇಲ್ಲ: ಸಚಿವ ಜಮೀರ್ ಅಹ್ಮದ್

Sampriya

ಭಾನುವಾರ, 1 ಸೆಪ್ಟಂಬರ್ 2024 (18:10 IST)
ಬೆಂಗಳೂರು: ಸಿದ್ದರಾಮಯ್ಯ ಯಾವತ್ತಿಗೂ ಟಗರೇ, ಭಯ ಬೀಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಜಮೀರ್ ಅಹ್ಮದ್ ಬ್ಯಾಟಿಂಗ್ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮುಡಾ ಸಂಬಂಧ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಹುಲಿ ಇದ್ದ ಹಾಗೇ, ಅವರ ಜತೆ ಹೈಕಮಾಂಡ್, ಶಾಸಕರು, ಹೆಚ್ಚಾಗಿ ರಾಜ್ಯದ ಜನತೆ ಇದ್ದಾರೆ.  ಬಿಜೆಪಿಯವರು ಸುಮ್ಮನೇ ಗೂಬೆ ಕೂರಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಸಿಎಂ ಸಿದ್ದರಾಮಯ್ಯ ಅವರ ಏಳಿಗೆಯನ್ನು ಸಹಿಸದೇ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ 8 ತಿಂಗಳ ಹಿಂದೆಯೇ ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವಂತೆ ಮನವಿ ಕೊಟ್ಟರು ಸಹ ಈವರೆಗೆ ಅನುಮತಿ ಕೊಟ್ಟಿಲ್ಲ. ಆದರೆ ಇದೀಗ ಏಕಾಏಕಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಇದು ಯಾವ ನ್ಯಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್  ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಯಾವ ಭಯವಿಲ್ಲ. ಅವರು ಟಗರು, ಟಗರು ಭಯ ಪಡುವ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ಹುಲಿ ಎಂದು ಜಮೀರ್ ಅಹ್ಮದ್ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ