ಇದು ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ: ಯಡಿಯೂರಪ್ಪ

ಗುರುವಾರ, 13 ಜುಲೈ 2017 (13:45 IST)
ಇಂದು ನಗರದಲ್ಲಿ ನಡೆಯುತ್ತಿರುವ ಸಭೆ ಶಾಂತಿ ಸಭೆಯಲ್ಲ, ಶಾಂತಿ ಕದಡುವ ಸಭೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಕೋಮುವಾದವನ್ನು ಹರಡುತ್ತಿರುವವರಿಂದ ಸಭೆ ನಡೆಯಲಾಗುತ್ತಿದೆ. ಆದ್ದರಿಂದ, ಬಿಜೆಪಿಯ ನಾಯಕರು ಶಾಂತಿ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ಹಿಂದಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಶಾಂತಿ ನೆಲೆಸಲು ಅನುವಾಗುವಂತೆ ಸರಕಾರ ವಿಚ್ಚಿದ್ರಕಾರಿ ಶಕ್ತಿಗಳನ್ನು ಸದೆಬಡೆಯಬೇಕು ಎಂದು  ಒತ್ತಾಯಿಸಿದ್ದಾರೆ.  
 
ಶರತ್ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ