ಯಡಿಯೂರಪ್ಪರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ: ಪರಮೇಶ್ವರ್

ಸೋಮವಾರ, 11 ಸೆಪ್ಟಂಬರ್ 2017 (18:05 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಹುಲ್ ಗಾಂಧಿಯವರನ್ನು ತನಿಖೆಗೆ ಒಳಪಡಿಸಬೇಕು ಅನ್ನೋದು ಬಾಲಿಶ ಹೇಳಿಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪರಿಂದ ನಾನು ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಇದು ಬಾಲಿಶ ಹೇಳಿಕೆ ಎಂದು ಹೇಳಿದ್ದಾರೆ.

ಇನ್ನು ಬಿಬಿಎಂಪಿ ಮೇಯರ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಮತ್ತು ನಾನು ಮಾತುಕತೆ ನಡೆಸುತ್ತೇವೆ. ಆ ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಹಾಗು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇವೆ. ಕೋಮುವಾದಿ ಶಕ್ತಿಗಳನ್ನು ದೂರ ಇಡಬೇಕು ಅನ್ನುವ ಕಾರಣಕ್ಕೆ ಇಬ್ಬರು ಬಿಬಿಎಂಪಿಯಲ್ಲಿ ಕೈ ಜೋಡಿಸಿದ್ದೇವೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ