ಜೈಲಿಗೆ ಹೋಗಿ ಬಂದವರು ಅಂದ್ರೆ ಜಾಗ್ರತೆ: ಸಿಎಂಗೆ ಬಿಎಸ್‌ವೈ ವಾರ್ನಿಂಗ್

ಮಂಗಳವಾರ, 4 ಜುಲೈ 2017 (13:34 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಜೈಲಿಗೆ ಹೋಗಿ ಬಂದವರು ಎಂದು ಹೇಳುತ್ತಾ ಅಪಮಾನ ಮಾಡುತ್ತಿದ್ದಾರೆ. ಇಂತಹ ಅಪಮಾನ ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ನನ್ನ ವಿರುದ್ಧದ ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ, ಪ್ರತಿ ಬಾರಿ ತಮ್ಮ ಭಾಷಣದಲ್ಲಿ ಜೈಲಿಗೆ ಹೋಗಿ ಬಂದವರು ಎನ್ನುತ್ತಾ ನನ್ನನ್ನು ಅಪಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳೊಳಗಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಲ್ಲದೇ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.
 
ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದರೂ ಪಕ್ಷದ ಹೈಕಮಾಂಡ್ ಕಣ್ಣುಮುಚ್ಚಿ ಕುಳಿತಿದೆ. ಇಂತಹ ಸರಕಾರಕ್ಕೆ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ