ಮನೆ ನಿರ್ಮಾಣ ಆರಂಭಿಸಲು ಸಾವಿರ ಕೋಟಿ ಬಿಡುಗಡೆ

ಶುಕ್ರವಾರ, 20 ಸೆಪ್ಟಂಬರ್ 2019 (22:34 IST)
ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಆರಂಭಿಸಲು ತಕ್ಷಣವೇ ಒಂದು ಲಕ್ಷ ರೂಪಾಯಿ ಬಿಡುಗಡೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದ್ರು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮುಖಂಡರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.

ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಜತೆಗೆ ರಾಜ್ಯ ಸರ್ಕಾರ ಕೂಡ ವಿಶೇಷ ಪರಿಹಾರ ಪ್ರಕಟಿಸಲಿದೆ.

ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ನೀಡಲಾಗಿದ್ದು, ಶೀಘ್ರ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಯನ್ನು ಮಾಡಲಿದೆ.

ಆಗಿರುವ ಹಾನಿಯನ್ನು ಸರಿಪಡಿಸಿ ಸಾಮಾನ್ಯ ಸ್ಥಿತಿಗೆ ತರುವುದು ಸರ್ಕಾರದ ಆದ್ಯತೆಯಾಗಿದೆ. ಹಾನಿಯ ಗಂಭೀರತೆಯನ್ನು ಅರಿತು ತಕ್ಷಣವೇ ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದ್ರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ