ವಿಜುಗೌಡ‌ ಪಾಟೀಲ್ ಪುತ್ರನಿಂದ ಧಮ್ಕಿ?

ಶುಕ್ರವಾರ, 5 ಮೇ 2023 (16:40 IST)
ಚುನಾವಣೆ ಹೊತ್ತಿನಲ್ಲಿ ರಾಜ್ಯದಲ್ಲಿ ಗುಂಡಿನ ಸದ್ದು ಕೇಳಿ ಬರ್ತಿದೆ.. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರಂತೆ.. ಬಿಜೆಪಿ ಅಭ್ಯರ್ಥಿ ವಿಜುಗೌಡ‌ ಪಾಟೀಲ್ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಧಮ್ಕಿ ಹಾಕಿದ್ದಾರೆಂದು ಆರೋಪ ಕೇಳಿ ಬಂದಿದೆ.. ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಗೂಂಡಾಗಿರಿ ಮಾಡ್ತಿದ್ದಾರೆಂದು ಕಾಂಗ್ರೆಸ್​ ಮುಖಂಡರು ಆರೋಪ ಮಾಡಿದ್ದಾರೆ.. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಅಲಗೂರ ಹಾಗೂ ಕೆಪಿಸಿಸಿ ವಕ್ತಾರ ಸಂಗಮೇಶ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅಭ್ಯರ್ಥಿ ವಿಜುಗೌಡ‌ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ.. ವಿಜುಗೌಡ ಪಾಟೀಲ್ ಗೂಂಡಾಗಿರಿ ಮಾಡುತ್ತಿದ್ದಾರೆ.. ಈ ಹಿಂದೆಯೂ ಗುಂಡು ಹಾರಿಸಿ ಬೆದರಿಕೆ ಹಾಕಿದ್ದರು ಎಂದು ಕಾಂಗ್ರೆಸ್​ ಮುಖಂಡರು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ