ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮುಂದಿನ 28 ಗಂಟೆಯಲ್ಲಿ ಸಹಿತ ಗುಡುಗು ಮಳೆ

ಶುಕ್ರವಾರ, 26 ಮೇ 2023 (14:05 IST)
ನಗರದಲ್ಲಿ ಸಂಜೆ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿದ ಹಿನ್ನಲೆ ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ತಲುಪಲಿದೆ.ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
 
ದಕ್ಷಿಣ ಒಳನಾಡು ಸೇರಿ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಸಹ ಗುಡುಗು ಸಹಿತ ಮಳೆಯಾಗುತ್ತದೆ.ಮುಂದಿನ ಐದು ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರಿಯಲಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ತುಮಕೂರು,ರಾಮನಗರ ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಮಲೆನಾಡು ಪ್ರದೇಶದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಒಳನಾಡಿನ ಒಂದೆರಡು ಕಡೆ ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು,ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ