ಕೋಲಾರಕ್ಕೆ ಇನ್ನೂ ಪ್ರಕಟವಾಗದ ಟಿಕೆಟ್

ಗುರುವಾರ, 6 ಏಪ್ರಿಲ್ 2023 (16:29 IST)
ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್​​​​ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ಕೆ.ಸಿ.ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ವೈ.ಎಸ್​.ವಿ.ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು, ಪುಲಕೇಶಿ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ