ಟಿಪ್ಪು ಜಯಂತ್ಯುತ್ಸವ: ಸಚಿವ ಡಿಕೆಶಿ ಹೇಳಿದ್ದೇನು ಗೊತ್ತಾ?

ಶನಿವಾರ, 10 ನವೆಂಬರ್ 2018 (16:43 IST)
ನಾಡಿಗೆ ಉತ್ತಮವಾದ ಕೆಲಸ ಮಾಡಿದವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕಾರಣಕ್ಕಾಗಿ ಟಿಪ್ಪು ಜಯಂತ್ಯುತ್ಸವ ಆಚರಣೆ ಎಲ್ಲೆಡೆ ಮಾಡಲಾಗುತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ಸರಕಾರ ಯಾರೊಬ್ಬರನ್ನು ಮೆಚ್ಚಿಸಲು ಜಯಂತ್ಯುತ್ಸವ ಆಚರಣೆ ಮಾಡುವುದಿಲ್ಲ ಎಂದಿರುವ ಅವರು, ಎಷ್ಟೇ ವಿರೋಧ ಮಾಡಿದರೂ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ನಿಲ್ಲುವುದಿಲ್ಲ ಎಂದು ಹೇಳಿದರು.

ಟಿಪ್ಪು ಜಯಂತಿ ಆಚರಣೆ ಜಯಂತಿ ಮುಂದುವರೆಯುತ್ತದೆ ಎಂದ ಅವರು, ಮುಸ್ಲಿಂ ಬಾಂಧವರ ಜತೆಗೆ ಸರಕಾರ ಇದೆ ಎಂದೂ ಹೇಳಿದರು.  

ಸರ್ಕಾರದ ವತಿಯಿಂದ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ನಲ್ಲಿ ನಡೆದ ಟಿಪ್ಪು ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಟಿಪ್ಪು ಜಯಂತಿ ಆಚರಣೆಯಿಂದ ಬಿಜೆಪಿಯವರಿಗೆ ತೊಂದರೆ ಯಾವ ರೀತಿಯಲ್ಲಿ ಆಗುತ್ತಿದೆಯೋ ಗೊತ್ತಿಲ್ಲ. ಧರ್ಮದಲ್ಲಿ ರಾಜಕೀಯ ಬೆರೆಸುವ ಕೆಲಸಕ್ಕೆ ಮುಂದಾಗಬಾರದು ಎಂದು ಹೇಳಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ