ಟಿಪ್ಪು ಸುಲ್ತಾನ್ ಅಚರಣೆಗಿಂತ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಚಿಂತಿಸಲಿ: ಶ್ರೀರಾಮುಲು

ಮಂಗಳವಾರ, 25 ಅಕ್ಟೋಬರ್ 2016 (15:50 IST)
ವಿವಾದಿತ ನಾಯಕ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಮೂಲಕ ರಾಜ್ಯ ಸರಕಾರ ವಿವಾದ ಸೃಷ್ಟಿಸುತ್ತಿದೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
 
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಿತ ನಾಯಕ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಘೋಷಿಸುವ ಮುನ್ನ ಆಗು ಹೋಗುಗಳ ಕುರಿತು ರಾಜ್ಯ ಸರಕಾರ ಚಿಂತಿಸಲಿ ಎಂದು ಹೇಳಿದರು. 
 
ಟಿಪ್ಪು ಜಯಂತಿ ಆಚರಿಸುವ ಮೂಲಕ ಅಣ್ಣ ತಮ್ಮಂದಿರಂತಿದ್ದ ಹಿಂದೂ-ಮುಸಲ್ಮಾನರ ಮಧ್ಯ ರಾಜ್ಯ ಸರಕಾರ ಒಡಕುಂಟು ಮಾಡಿದೆ. ರಾಜ್ಯ ಸರಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು. 
 
ಕಳೆದ ವರ್ಷ ಟಿಪ್ಪು ಸಲ್ತಾನ್ ಜಯಂತಿ ವೇಳೆ ರಾಜ್ಯದಲ್ಲಿ ಸಾಕಷ್ಟು ಹಿಂಸಾಚಾರ ನಡೆದಿದೆ. ಆದರೂ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ವಿವಾದಿತ ನಾಯಕನ ಜಯಂತಿ ಆಚರಿಸುವು ಅವಶ್ಯಕತೆ ಇಲ್ಲ ಎಂದು ಸಂಸದ ಶ್ರೀರಾಮುಲು ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ