ಟಿಪ್ಪು ಜಯಂತ್ಯುತ್ಸವಕ್ಕೆ ಮುಖ್ಯಮಂತ್ರಿ ಗೈರು: ಶಾಸಕ ಆಕ್ರೋಶ

ಶನಿವಾರ, 10 ನವೆಂಬರ್ 2018 (14:04 IST)
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ, ಡಿಸಿಎಂ ಗೈರು ಹಾಜರಾಗಿರುವುದಕ್ಕ್ಲೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಕ್ರೋಶಗೊಂಡಿದ್ದಾರೆ.

ಟಿಪ್ಪು ಸುಲ್ತಾನ್ ಜಯಂತ್ಯುತ್ಸವಕ್ಕೆ ಸಿಎಂ ಹಾಗೂ ಡಿಸಿಎಂ ಗೈರಾಗುವ ಮೂಲಕ ಮುಸ್ಲಿಂ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದಿದ್ದಾರೆ.

ಸಿಎಂ  ಎಲ್ಲಿದ್ದಾರೋ ಅಲ್ಲಿ ನಡೆಯುವ ಟಿಪ್ಪು ಜಯಂತಿ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.  

ಟಿಪ್ಪು ಜಯಂತಿ ಆಚರಣೆ ಕಾರಣರಾದ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಅಭಿನಂದಿಸುವುದಾಗಿ ತನ್ವೀರ್ ಸೇಠ್ ಹೇಳಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ