ಟಿಪ್ಪು ಸುಲ್ತಾನ್‌ನ ತದ್ರೂಪ ಬಹುಮನಿ ಸುಲ್ತಾನ್– ಕೋಟಾ ಶ್ರೀನಿವಾಸ ಪೂಜಾರಿ

ಬುಧವಾರ, 14 ಫೆಬ್ರವರಿ 2018 (20:15 IST)
ಉಡುಪಿ: ಬಹುಮನಿ ಸುಲ್ತಾನ್ಉತ್ಸವ ಆಚರಣೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಹುಮನಿ ಸುಲ್ತಾನ್ ಟಿಪ್ಪು ಸುಲ್ತಾನಿನ ತದ್ರೂಪ ಎಂದು ಹೇಳಿದ್ದಾರೆ.


ಉಡುಪಿಯಲ್ಲಿ ಮಾತನಾಡಿದ ಅವರು, ಕ್ರೌರ್ಯದ ಸಂಕೇತವಾದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಲು ಮುಂದಾಗಿದ್ದು, ಈ ಸರ್ಕಾರ ಇಂತಹದ್ದನ್ನೇ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.


ಬಹುಮನಿ ಸುಲ್ತಾನ್ ಉತ್ಸವದ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕು. ರಾಜ್ಯದ ಜನರ ಅಭಿಪ್ರಾಯವನ್ನು ಪಡೆದುಕೊಂಡು ಈ ನಿರ್ಧಾರ ಕೈಬಿಡಬೇಕು ಎಂದಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ