ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಟೈಟ್ ಸೆಕ್ಯುರಿಟಿ

ಗುರುವಾರ, 23 ಜನವರಿ 2020 (12:55 IST)
ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ವಿಶೇಷ ಭದ್ರತೆ ಒದಗಿಸಲಾಗಿದೆ. 
 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ನಂತರ ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ವಿಶೇಷ ಭದ್ರತೆ ಒದಗಿಸಲಾಗಿದೆ.  ದೇವಾಲಯದ ಎಲ್ಲಾ ಪ್ರವೇಶದ್ವಾರದಲ್ಲಿ ಸುಬ್ರಹ್ಮಣ್ಯ ಪೊಲೀಸರು ಭದ್ರತಾ ಸಿಬ್ಬಂದಿ ನೇಮಿಸಿದ್ದಾರೆ.

ದೇವಾಲಯದ ಒಳಹೋಗುವ ಭಕ್ತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ ಪ್ರವಾಸಿಗರ ಕೈಯಲ್ಲಿರುವ ಬ್ಯಾಗ್ ಗಳನ್ನು ಪರಿಶೀಲಿಸಲಾಗುತ್ತಿದೆ. ತಪಾಸಣೆ ಕಾರ್ಯ ಮುಂದುವರಿದಿದೆ. 

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ವಾಹನ ಮತ್ತು ಜನರ ಚಲನವಲನಗಳ ಮೇಲೂ ಭದ್ರತಾ ಸಿಬ್ಬಂದಿ ನಿಗಾವಹಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ