ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಿಎಂ ಅಭ್ಯರ್ಥಿ ಆಗಲು ಆಕ್ಷೇಪಣೆಯಿಲ್ಲ. ಆದರೆ, ಯಾವ ಕಾರಣಕ್ಕೆ ಹಿರಿಯ ಪದಾಧಿಕಾರಿಗಳನ್ನು ಕೈ ಬಿಟ್ಟು ಹೊಸಬರಿಗೆ ಆದ್ಯತೆ ನೀಡಲಾಗಿದೆ ಎನ್ನುವ ಬಗ್ಗೆ ಅವರು ಉತ್ತರಿಸಲೇಬೇಕು ಎಂದು ಮಾಜಿ ಸಚಿವರು, ಶಾಸಕರು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಹೋಟೆಲ್ನಲ್ಲಿ ಸಭೆ ಸೇರಿರುವ ಅತೃಪ್ತ ಬಿಜೆಪಿ ಮುಖಂಡರು, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದಾದರೆ ಸಂತೋಷ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಸಂಘಟನೆಯಲ್ಲಿ ದುಡಿಯದವರಿಗೆ ಪದಾಧಿಕಾರಿಗಳಲ್ಲಿ ಸ್ಥಾನ ನೀಡಿರುವುದು ವಿಷಾದದ ಸಂಗತಿಯಾಗಿದೆ ಎಂದು ಮಾಜಿ ಶಾಸಕರು ತಿಳಿಸಿದ್ದಾರೆ.