ಈತ 3 ಎಕರೆ ಜಮೀನು ಹೊಂದಿದ್ದು, ಮೆಕ್ಕೆ ಜೋಳ ಹಾಗೂ ಹತ್ತಿ ಬೆಳೆಯುತ್ತಿದ್ದ ಎನ್ನಲಾಗಿದ್ದು, ಬೆಳೆಯಲ್ಲಿ ನಷ್ಟ ಅನುಭವಿಸಿದ್ದ. ಅಲ್ಲದೆ ಬೆಳೆಗಾಗಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ. ಆದ್ದರಿಂದ ಬ್ಯಾಂಕ್ ಸಿಬ್ಬಂದಿ ನೋಟಿಸ್ ಜಾರಿಗೊಳಿಸಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದ ಗ್ರಾಮದ ಹೊರ ವಲಯದಲ್ಲಿ ಹರಿಯುವ ಕುಮಧ್ವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆ: ಈತ ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಎನ್ನಲಾಗಿದ್ದು, ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಆದ್ದರಿಂದ ಇಂದು ಬೆಳಗ್ಗೆ ನದಿಯ ದಡದಲ್ಲಿ ಮೃತ ದೇಹ ಪತ್ತೆಯಾಗಿದೆ. ದೇಹವನ್ನು ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.