ಉಜಳಂಬ ಗ್ರಾಮದಲ್ಲಿ ಇಂದು ಸಿಎಂ 3ನೇ ಗ್ರಾಮವಾಸ್ತವ್ಯ

ಗುರುವಾರ, 27 ಜೂನ್ 2019 (09:56 IST)
ಬೀದರ್ : ಸಿಎಂ ಕುಮಾರಸ್ವಾಮಿಯವರು ರಾಯಚೂರಿನ ಕರೇಗುಡ್ಡದಲ್ಲಿ 2ನೇ ಗ್ರಾಮವಾಸ್ತವ್ಯ ಮುಗಿಸಿ ಇಂದು ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸಿಎಂ ಅವರು  ವಾಸ್ತವ್ಯ ಮಾಡುತ್ತಿರುವ 3ನೇ ಗ್ರಾಮ ಇದಾಗಿದೆ.




ಸಿಎಂ ಕುಮಾರಸ್ವಾಮಿ ಬೆಳಗ್ಗೆ 5 ಕ್ಕೆ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಿಂದರಸ್ತೆ ಮಾರ್ಗವಾಗಿ ಹೊರಟು, 10.30 ಕ್ಕೆ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಕ್ಕೆ ಆಗಮಿಸುವರು.


ಈ ಹಿನ್ನಲೆಯಲ್ಲಿ ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಲಾಗಿದೆ. ಜೊತೆಗೆ ಸಿಎಂ ವಾಸ್ತವ್ಯಕ್ಕಾಗಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಮುಂಭಾಗ ಜನತಾ ದರ್ಶನಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ