ಇಂದು ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ ವಿವಾಹ ಮಹೋತ್ಸವ; ವಧುವರರಿಗೆ ಶುಭ ಹಾರೈಸಿದ ಸಿಎಂ

ಗುರುವಾರ, 5 ಮಾರ್ಚ್ 2020 (10:07 IST)
ಬೆಂಗಳೂರು : ಆರೋಗ್ಯ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾಳ ವಿವಾಹ ಮಹೋತ್ಸವವು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದೆ.


ಶ್ರೀರಾಮುಲು ಅವರ ಪುತ್ರಿ ರಕ್ಷಿತಾಳ ವಿವಾಹವು ಲಲಿತ್ ಸಂಜೀವ್ ರೆಡ್ಡಿ ಅವರ ಜೊತೆ ನಡೆಯುತ್ತಿದ್ದು, ಅದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 40 ಎಕರೆ ಜಾಗದಲ್ಲಿ ಹಂಪಿ ವಿರುಪಾಕ್ಷೇಶ್ವರ ಮತ್ತು ತಿರುಪತಿ ತಿಮ್ಮಪ್ಪನ ಮಾದರಿಯಲ್ಲಿ ಬೃಹತ್ ಸೆಟ್ ಹಾಕಲಾಗಿದೆ.


ಈ ಕಾರ್ಯಕ್ರಮಕ್ಕೆ ಹಲವು ರಾಜಕೀಯ ಗಣ್ಯರು ಆಗಮಿಸುತ್ತಿದ್ದು ವಧುವರರಿಗೆ ಶುಭ ಹಾರೈಸಿದ್ದಾರೆ. ಇಂದು ಬಜೆಟ್ ಇರುವ ಹಿನ್ನಲೆಯಲ್ಲಿ ಇದೀಗ ಸಿಎಂ ಯಡಿಯೂರಪ್ಪ ಅವರು ವಿವಾಹ ಸಮಾರಂಭಕ್ಕೆ ಆಗಮಿಸಿ ವಧುವರರಿಗೆ ಆಶೀರ್ವದಿಸಿ ಅಲ್ಲಿಂದ ವಿಧಾನಸೌಧಕ್ಕೆ ತೆರಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ