ಇಂದು ನಂದಿಗಿರಿಧಾಮ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು

ಭಾನುವಾರ, 2 ಜುಲೈ 2023 (14:03 IST)
ಚಿಕ್ಕಬಳ್ಳಾಪುರ : ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ಭಾನುವಾರ (ಇಂದು) ವಿಶ್ವವಿಖ್ಯಾತ ನಂದಿಗಿರಿಧಾಮ ಹಾಗೂ ಸ್ಕಂದಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದ ಜಿಲ್ಲಾಡಳಿತದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.
 
ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಹಾಗೂ ಎಸ್ಪಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಈಗ ಸಾರ್ವಜನಿಕರು ಹಾಗೂ ಪ್ರವಾಸಿಗರ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸೋಮವಾರ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ