ನಾಳೆ ಸಿಎಂ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಭೇಟಿ

ಶುಕ್ರವಾರ, 15 ಸೆಪ್ಟಂಬರ್ 2017 (20:34 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ನಾಳೆ ಮಧ್ಯಾಹ್ನ ಎಚ್‌ಎಎಲ್ ಏರ್‌ಪೋರ್ಟ್‌ನಿಂದ ನವದೆಹಲಿಗೆ ತೆರಳಲಿದ್ದು, ರಾಜ್ಯದ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಸೋನಿಯಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಮುಖಂಡರು ತಿಳಿಸಿದ್ದಾರೆ.
 
ಸಿಎಂ ಆರೋಗ್ಯ ಇಂದು ಸರಿಯಿಲ್ಲವಾದ್ದರಿಂದ ನಾಳೆ ಸೋನಿಯಾ ಭೇಟಿಗೆ ನಿರ್ಧರಿಸಿದ್ದಾರೆ. ಸೋನಿಯಾ ಅವರೊಂದಿಗೆ ಮುಂಬರುವ ವಿಧಾನಭೆ ಚುನಾವಣೆ ಸಿದ್ದತೆ ಬಗ್ಗೆ ಕೂಡಾ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಜಯಭೇರಿ ದಾಖಲಿಸಿ ಸರಕಾರ ರಚಿಸುವ ಉತ್ಸಾಹದಲ್ಲಿದೆ. ಚುನಾವಣೆ ರಣತಂತ್ರಗಳ ಬಗ್ಗೆ ಕೂಡಾ ಸೋನಿಯಾ ಅವರಿಂದ ಸಿಎಂ ಸಲಹೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ