ಧರ್ಮಸಿಂಗ್ ನಿಧನ: ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ಕಚೇರಿ, ಶಾಲಾಕಾಲೇಜುಗಳಿಗೆ ರಜೆ

ಗುರುವಾರ, 27 ಜುಲೈ 2017 (13:30 IST)
ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನಿಧನದಿಂದಾಗಿ ನಾಳೆ ಕಲಬುರಗಿ, ಬೀದರ್‌ ಜಿಲ್ಲೆಯಲ್ಲಿ ಕಚೇರಿ, ಶಾಲಾಕಾಲೇಜುಗಳಿಗೆ ರಜೆ ಘೋಷಿಸಿ ಸರಕಾರ ಆದೇಶ ಹೊರಡಿಸಿದೆ.
 
ರಾಜ್ಯದಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ನಗರದ ಶರಣನಗರದಲ್ಲಿರುವ ನಿವಾಸದಲ್ಲಿ ಪಾರ್ಥೀವ ಶರೀರ ಜನರ ದರ್ಶನಕ್ಕಾಗಿ ಇಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.  ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ಹೆಲಿಕಾಪ್ಟರ್ ಮೂಲಕ ಅವರ ಪಾರ್ಥೀವ ಶರೀರ ರವಾನಿಸಲಾಗುತ್ತಿದೆ.
 
ನಾಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಧರ್ಮಸಿಂಗ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ