ಸಂಪುಟ ಪುನಾರಚನೆಯಲ್ಲಿ ಅಂಬರೀಶ್, ವಿ.ಶ್ರೀನಿವಾಸ್ ಪ್ರಸಾದ್ ಸೇರಿದಂತೆ 13 ಸಚಿವರನ್ನು ಕೈಬಿಟ್ಟಿರುವುದು, ಸಚಿವರ ಬೆಂಬಲಿಗರನ್ನು ಕೆರಳಿಸಿದ್ದು, ಕೆಲವೆಡೆ ಭಾರಿ ಪ್ರತಿಭಟನೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಚಿವರ ಬೆಂಬಲಿಗರು ರಸ್ತೆ ತಡೆ ನಡೆಸಿದ್ದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗಿದೆ.