ನಾಳೆ ರಾಜ್ಯಾದ್ಯಂತ ರೈಲು ಬಂದ್: ವಾಟಾಳ್ ನಾಗರಾಜ್

ಬುಧವಾರ, 14 ಸೆಪ್ಟಂಬರ್ 2016 (19:40 IST)
ಕಾವೇರಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್ ಗಮನ ಸೆಳೆಯಲು ಹೋರಾಟಕ್ಕೆ ಮುಂದಾಗಿದ್ದು, ರಾಜ್ಯಾದ್ಯಂತ ರೈಲ್ವೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
 
ತಮಿಳುನಾಡಿಗೆ ನೀರು ಹರಿಸಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಆಕ್ರೋಶಗೊಂಡಿದ್ದು, ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ರೈಲ್ವೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
 
ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೆಪ್ಟೆಂಬರ್ 15 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರಿಗೆ ರೈಲ್ವೆ ಬಂದ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. 
 
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿತ್ತು. ಇಂದು ಸಹ ಕಾವೇರಿ ಹೋರಾಟ ಮುಂದುವರಿದಿರುವುದು ಸರಕಾರದ ಕಳವಳಕ್ಕೆ ಕಾರಣವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ