ಜುಲೈ 7 ರಿಂದ ಶುರುವಾಗುತ್ತಾ ಕಠಿಣ ಲಾಕ್ ಡೌನ್ ?

ಸೋಮವಾರ, 29 ಜೂನ್ 2020 (19:33 IST)

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವುದರಿಂದ ಸರಕಾರ ದಿಟ್ಟ ಹೆಜ್ಜೆ ಇಡಲು ಮುಂದಾಗುತ್ತಿದೆಯಾ ಅನ್ನೋ ಅನುಮಾನ ಮೂಡುತ್ತಿದೆ.


ಯಾವುದಕ್ಕೂ ಉತ್ತರ ಸಿಗಬೇಕಾದರೆ ಜುಲೈ 7 ರವರೆಗೆ ಕಾಯಿರಿ. ಹೀಗಂತ ಸಚಿವ ಆರ್. ಅಶೋಕ್ ಹೇಳಿಕೆ ನೀಡಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ಬೆಂಗಳೂರಿನಲ್ಲಿ ಮಾತ್ರ ಕಠಿಣ ಲಾಕ್ ಡೌನ್ ಜಾರಿಯಾಗುತ್ತಾ? ಅಥವಾ ರಾಜ್ಯದೆಲ್ಲೆಡೆ ಲಾಕ್ ಡೌನ್ ಬಿಗಿಗೊಳ್ಳುತ್ತಾ ಅನ್ನೋ ಪ್ರಶ್ನೆ ಕೇಳಿಬರುತ್ತಿದೆ.

ಯಾವುದಕ್ಕೂ ಜುಲೈ 7 ರ ಬಳಿಕವಷ್ಟೇ ಸರಕಾರದಿಂದ ಸ್ಪಷ್ಟ ಆದೇಶ ಹೊರಬೀಳಲಿದೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ