ಪ್ರವಾಸಿಗರೇ ಎಚ್ಚರ..! ನಾನ್ ವೆಜ್ ಹೋಟೆಲ್ನಲ್ಲಿ ಕುರಿ ಬದಲು ದನದ ಮಾಂಸದ ಬಿರಿಯಾನಿ!

ಗುರುವಾರ, 31 ಆಗಸ್ಟ್ 2023 (10:06 IST)
ಚಿಕ್ಕಮಗಳೂರು : ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂಸ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್ ಹಾಗೂ ಎವರೆಸ್ಟ್ ಹೋಟೆಲ್ನಲ್ಲಿ ದನದ ಮಾಂಸ ಇದ್ದಾಗಲೇ ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಎರಡು ಹೋಟೆಲ್ನಲ್ಲಿ ಊಟ ಮಾಡಿದ ಸ್ಥಳಿಯರು ಪೊಲೀಸರಿಗೆ ದೂರು ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ನಗರ ಪೊಲೀಸರು ಐದು ಕೆಜಿ ದನದ ಮಾಂಸ ಹಾಗೂ ಅದರಿಂದ ತಯಾರಿಸಿದ್ದ ಬಿರಿಯಾನಿಯನ್ನೂ ವಶಕ್ಕೆ ಪಡೆದಿದ್ದಾರೆ. 

ಕಾಫಿನಾಡು ಚಿಕ್ಕಮಗಳೂರು ಪ್ರವಾಸಿ ಜಿಲ್ಲೆ. ಆ ಪ್ರವಾಸೋದ್ಯಮದಿಂದಲೇ ಕಾಫಿನಾಡಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಲಕ್ಷಾಂತರ ಕುಟುಂಬಗಳು ಬದುಕುತ್ತಿವೆ. ಪ್ರವಾಸಿಗರನ್ನು ಆಕರ್ಷಿಸಲು ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಆದರೆ ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆ ಹಣ ಮಾಡುವ ಉದ್ದೇಶದಿಂದ ಕೆಲ ಹೋಟೆಲ್ಗಳಲ್ಲಿ ಕುರಿ ಮಾಂಸದ ಬದಲು ದನದ ಮಾಂಸದಲ್ಲಿ ಬಿರಿಯಾನಿ ಸೇರಿದಂತೆ ನಾನ್ ವೆಜ್ ಅಡುಗೆ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ