ಮೃತರನ್ನು ಕಂಬೇಶ್(45), ನಟರಾಜು(50) ಮತ್ತು ಈಶ್ವರಪ್ಪ(60) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಕೂಡ ಜಿಲ್ಲೆಯ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿ ಮೂಲದವರು ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆ: ಇಂದು ಶ್ರೀರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದ ಹಲವು ಮಂದಿ ಟ್ರ್ಯಾಕ್ಟರ್ನಲ್ಲಿ ರಂಗಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ ಟ್ರ್ಯಾಕ್ಟರ್ ಕಣಿವೆ ಪ್ರದೇಶವಾದ ಲೋಕದಾಳು ಬಳಿ ಸಾಗುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.