ಚಿಕ್ಕಬಳ್ಳಾಪುರದಲ್ಲಿ ಟ್ರಾಕ್ಟರ್ - ಕ್ಯಾಂಟರ್ ಡಿಕ್ಕಿ

ಶನಿವಾರ, 16 ಡಿಸೆಂಬರ್ 2017 (10:21 IST)
ಚಿಕ್ಕಬಳ್ಳಾಪುರ: ಕಲ್ಲು ಚಪ್ಪಡಿ ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಟ್ರಾಕ್ಟರ್ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಚೆಂಡೂರು ಬಳಿ ನಡೆದಿದೆ.


ನಾರಾಯಣ ಸ್ವಾಮಿ (30) ಸ್ಥಳದಲ್ಲೇ  ಸಾವನಪ್ಪಿದ ಟ್ಯಾಕ್ಟರ್ ಚಾಲಕ. ರಾಷ್ಟ್ರೀಯ ಹೆದ್ದಾರಿ-7ರ ಚೆಂಡೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದಟ್ಟ ಮಂಜು ಆವರಿಸಿದ್ದ ಕಾರಣ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ.
ಕ್ಯಾಂಟರ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆತನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಗುಡಿಬಂಡೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ