ವ್ಯಾಪಾರಿ ಆತ್ಮಹತ್ಯೆ : ತರಕಾರಿ ಮಾರುಕಟ್ಟೆ ಆರಂಭ

ಶನಿವಾರ, 30 ಮೇ 2020 (20:27 IST)
ವ್ಯಾಪಾರಿಯೊಬ್ಬ ಸಾಲದ ಬಾಧೆ ತಾಳದೇ ಆತ್ಮಹತ್ಯೆಗೆ ಶರಣಾದ ಘಟನೆ ಮಾಸುವ ಮುನ್ನವೇ ಇದೀಗ ತರಕಾರಿ ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ.

ಕಲಬುರಗಿ ನಗರದ ಸೂಪರ್ ಮಾರ್ಕೆಟ್ ನಲ್ಲಿ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಮಾರಾಟ ಆರಂಭಿಸಿದ್ದಾರೆ.
ಬೆಳಗ್ಗೆ 10 ರಿಂದ ಸಂಜೆ4 ರವರೆಗೆ ತರಕಾರಿ ಹಾಗೂ ದಿನಸಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಜರ್, ಸಾಮಾಜಿಕ ಅಂತರ ಪಾಲಿಸುವಂತೆ ಸೂಚನೆ ಕೊಡಲಾಗಿದೆ.
ಲಾಕ್ ಡೌನ್ ನಿಂದಾಗಿ ವ್ಯಾಪಾರಕ್ಕಾಗಿ ಸಾಲ ಮಾಡಿದ್ದ ವ್ಯಕ್ತಿಯೊಬ್ಬ ಕಳೆದ ವಾರ ಆತ್ಮಹತ್ಯೆಗೆ ಶರಣಾಗಿದ್ದನು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ