ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಾರಿಗೆ ನೌಕರರ ವೇತನವನ್ನು 35 ಪ್ರತಿಶತಕ್ಕೆ ಹೆಚ್ಚಶ ಮಾಡುವಂತೆ ಒತ್ತಾಯ ಮಾಡಲಾಗಿತ್ತು. ಆದರೆ, 10 ಪ್ರತಿಶತ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ನೀಡಿದ್ದಾರೆ. ಅದಾಗ್ಯೂ ರಾಜ್ಯ ಸರಕಾರದ ಬೊಕ್ಕಸಕ್ಕೆ 1550 ಕೋಟಿ ಹೊರೆಯಾಗಲಿದೆ ಎಂದು ತಿಳಿಸಿದರು.