ಕಲಬುರಗಿ ಎಸಿಬಿ ಅಧಿಕಾರಿಗಳ ಬಲೆಗೆ ಸಾರಿಗೆ ಅಧಿಕಾರಿಗಳು

ಮಂಗಳವಾರ, 20 ಜೂನ್ 2017 (18:48 IST)
ಲಂಚ ಪಡೆಯುತ್ತಿದ್ದ ವೇಲೆ ಎಸಿಬಿ ಅಧಿಕಾರಿಗಳ ಬಲೆಗೆ ಇಬ್ಬರು ಸಾರಿಗೆ ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ.
ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟ್ರಾಫಿಕ್ ಇನ್ಸೆಪೆಕ್ಟರ್ ಗಿರೀಶ್ ಮತ್ತು ಟ್ರಾಫಿಕ್ ಕಂಟ್ರೋಲರ್ ಸಿದ್ದರಾಮೇಗೌಡ ಲಂಚದ ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿದ್ದಾರೆ.  
 
ಕಂಡಕ್ಟರ್ ಮಲ್ಲಣ್ಣನಿಗೆ ಮೆಮೋ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಕಂಟ್ರೋಲರ್ ಸಿದ್ದರಾಮೇಗೌಡ, ಟ್ರಾಫಿಕ್ ಇನ್ಸೆಪೆಕ್ಟರ್ ಗಿರೀಶ್, 4000 ರೂ ಲಂಚ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ. ಮಲ್ಲಣ್ಣನಿಂದ ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ಇಬ್ಬರು ಅಧಿಕಾರಿಗಳು ಬಲೆಗೆ ಬಿದ್ದಿದ್ದಾರೆ. 
 
ಎಸಿಬಿ ಅಧಿಕಾರಿ ಡಿವೈಎಸ್‌ಪಿ ಸಂತೋಷ್ ಬನಹಟ್ಟಿ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ