ರಾಜ್ಯಾದ್ಯಂತ ಧರಣಿ ನಡರಸಿದ ಸಾರಿಗೆ ನೌಕರರು

ಮಂಗಳವಾರ, 24 ಜನವರಿ 2023 (18:06 IST)
ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದು ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಸಿದ್ದಾರೆ. ಹಾಗೂ ಸಾರಿಗೆ ನೌಕರರು ಫ್ರೀಡಂ ಪಾರ್ಕ್ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದು,ಸಾರಿಗೆ ನೌಕರರಿಗೆ ಶೇ 25 ರಷ್ಟು ವೇತನ ಹೆಚ್ಚಳ ಆಗಬೇಕು ನೌಕರರ ಹಾಲಿ ಇರುವ ಭತ್ಯೆಗಳು 5 ಪಟ್ಟು ಹೆಚ್ಚಿಸಬೇಕು,ನೌಕರರಿಗೆ ಪ್ರತಿ ತಿಂಗಳು ಹೊರರೋಗಿ ಚಿಕಿತ್ಸೆ ವೆಚ್ಚಕ್ಕಾಗಿ 2 ಸಾವಿರ ನೀಡುವುದು ಕುರಿತಂತೆ ಕಳೆದ ಬಾರಿ ಮುಷ್ಕರ ವೇಳೆ ವಜಾಗೊಂಡ ನೌಕರರ ಮರುನೇಮಕ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು ಸಾರಿಗೆ ನೌಕರರು ಪ್ರತಿಭಟನೆಯನ್ನ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ