ಎರಡು ದಿನದಿಂದ ರಸ್ತೆಯಲ್ಲಿ ಮರಗಳು ಬಿದ್ದಿದ್ರು ತೆರವು ಗೊಳಿಸದ ಪಾಲಿಕೆ ನಿರ್ಲಕ್ಷ್ಯ

ಮಂಗಳವಾರ, 23 ಮೇ 2023 (14:40 IST)
ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನದಿಂದ ಸುರಿದ ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ.ಭಾರಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿದೆ.ಮರ ಬಿದ್ದು ಎರಡು ದಿನವಾದರೂ ಮರದ ತುಂಡುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ.ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಬಿದ್ದಿದೆ.ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆಯ ಸುತ್ತಮುತ್ತ  ಸಾಕಷ್ಟು ಮರಗಳು ಧರೆಗುರುಳಿದೆ.ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕ್ತಿದ್ದಾರೆ.ಕೂಡಲೇ ಮರದ ತುಂಡುಗಳನ್ನು ತೆರವುಗೊಳಿಸಬೇಕಾಗಿ ಅಧಿಕಾರಿಗಳಲ್ಲಿ ಮನವಿ ಜನರು ಮನವಿ ಮಾಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ