ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿ ಗೌಡ ಇನ್ನಿಲ್ಲ
ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಬಳಿಕ ಕಳೆದ ವರ್ಷ ಅಂದರೆ 2023ರಲ್ಲಿ ತುಳಸಿ ಗೌಡ ಅವರಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.