ತುಳುನಾಡು ಬಂಗಾರದ ನಾಡು ಆಗಲಿದೆ : ಸಿಎಂ

ಶನಿವಾರ, 28 ಜನವರಿ 2023 (07:28 IST)
ಉಡುಪಿ : ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮ ಥೀಂ ಪಾರ್ಕನ್ನು ಸಿ.ಎಂ ಬಸವರಾಜ್ ಬೊಮ್ಮಾಯಿ ಉದ್ಘಾಟನೆ ಮಾಡಿದರು.
 
ಪರಶುರಾಮನ ಬೃಹತ್ ಪ್ರತಿಮೆಯ ಮೂಲಕ ತುಳುನಾಡು ಬಂಗಾರದ ನಾಡು ಆಗಲಿ ಎಂದು ಈ ವೇಳೆ ಸಿಎಂ ಶುಭ ಹಾರೈಸಿದರು. ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕಾರ್ಕಳಕ್ಕೆ ಆಗಮಿಸಿದ ಬೊಮ್ಮಾಯಿ, ಕಾರ್ಕಳ ಜಿಲ್ಲಾ ಕ್ರೀಡಾಂಗಣದಲ್ಲಿ ಇಳಿದು ರಸ್ತೆ ಮಾರ್ಗ ಮೂಲಕ ಬೈಲೂರಿಗೆ ಆಗಮಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್ ಪರಶುರಾಮನ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಥೀಂ ಪಾರ್ಕ್ ನ ಉದ್ಘಾಟನೆ ಮಾಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ