ಸಿಎಂ ಆದಿತ್ಯನಾಥ್ ವಿರುದ್ಧ ಟ್ವೀಟ್ ಟೀಕೆ: ಐಪಿಎಸ್ ಅಧಿಕಾರಿ ಸಸ್ಪೆಂಡ್

ಶನಿವಾರ, 25 ಮಾರ್ಚ್ 2017 (14:20 IST)
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟೀಕೆ ಮಾಡಿದ್ದರಿಂದ ಐಎಎಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ.
 
ಐಪಿಎಸ್ ಅಧಿಕಾರಿ ಹಿಮಾಂಶುಕುಮಾರ್ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಯಾದವ್ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಯೋಗಿ ಸರಕಾರದಲ್ಲಿ ಕಿರುಕುಳ ಎನ್ನುವ ಸಂದೇಶವನ್ನು ಪೋಸ್ಟ್ ಮಾಡಿದ್ದರು. 
 
ಸರಕಾರಿ ಅಧಿಕಾರಿಯಾಗಿ ಮುಖ್ಯಮಂತ್ರಿ ವಿರುದ್ಧವೇ ಟೀಕೆ ಮಾಡಿರುವುದು ಕಾನೂನು ವಿರೋಧಿ ಕೃತ್ಯ ಎನ್ನುವ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹಿಮಾಂಶುಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ