ಅಪಘಾತ: ಇಬ್ಬರು ಸರ್ಕಲ್ ಇನ್ಸ್ಪೆಕ್ಟರ್ಗಳಿಗೆ ಗಂಭೀರ ಗಾಯ!
ಗುರುವಾರ, 21 ಜುಲೈ 2016 (11:32 IST)
ಲಾರಿಗೆ ಇನೋವಾ ಕಾರ್ ಡಿಕ್ಕಿ ಹೊಡೆದ ಪರಿಣಾವಾಗಿ ಇಬ್ಬರು ಸರ್ಕಲ್ ಇನ್ಸ್ಪೆಕ್ಟ್ಗಳಿಗೆ ಗಂಭೀರ ಗಾಯಗಳಾದ ಘಟನೆ ತುಮಕೂರು ಜಿಲ್ಲೆಯ ಊರುಕೆರೆ ರಾಷ್ಟೀಯ ಹೆದ್ದಾರಿ 4 ರಲ್ಲಿ ವರದಿಯಾಗಿದೆ.
ಗಿರೀಶ ಹಾಗೂ ಆನಂದ್ ಕಬೂರಿ ಅವರು ಗಾಯಗೊಂಡ ಸಿಸಿಬಿ ಸರ್ಕಲ್ ಇನ್ಸ್ಪೆಕ್ಟರ್ ಎಂದು ತಿಳಿದು ಬಂದಿದೆ. ಇವರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಸಮಯದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಿಸಿಬಿ ಇನ್ಸ್ಪೆಕ್ಟರ್ಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.