ಹಾಸನದ ಸಕಲೇಶಪುರದ ಬಾಗೆ ಗ್ರಾಮದಲ್ಲಿರುವ ಜೆಎಸ್ಎಸ್ ವಸತಿ ಶಾಲೆ ವತಿಯಿಂದ ಸುಮಾರು 60 ಮಕ್ಕಳೊಂದಿಗೆ ಪ್ರವಾಸ ಹೋಗಿದ್ದರು. ಈ ವೇಳೆ ಜಲಪಾತದ ಸೌಂದರ್ಯವನ್ನು ವೀಕ್ಷಿಸುತ್ತಿದ್ದಾಗ ವಿದ್ಯಾರ್ಥಿ ಮದನ್ ಗೋಪಾಲ್ ಆಯ ತಪ್ಪಿ ಜಲಪಾತಕ್ಕೆ ಬಿದ್ದಿದ್ದಾನೆ. ಇದನ್ನು ಕಂಡ ವಾರ್ಡನ್ ಶಿವಕುಮಾರ್, ವಿದ್ಯಾರ್ಥಿಯನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ ರಕ್ಷಿಸುವಲ್ಲಿ ವಿಫಲವಾಗಿರುವ ವಾರ್ಡನ್ ಕೂಡ ಸಾವನ್ನಪ್ಪಿದ್ದಾರೆ.