ತಮಕೂರು ಹೊರವಲಯದ ಎನ್.ಹೆಚ್ 48 ರ ನಂದಿಹಳ್ಳಿ ಬಳಿ ನಡೆದ ಅಪಘಾತದಲ್ಲಿ ಅಪರಿಚತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತರನ್ನು ಬಾಲಾಜಿ(18) ಮತ್ತು ಮೋಹಿನ್(27) ಎಂದು ಹೇಳಲಾಗಿದ್ದು, ಮೃತರಿಬ್ಬರೂ ಕೂಡ ಬೆಂಗಳೂರಿನ ಪೀಣ್ಯ ಮೂಲದವರಾಗಿದ್ದಾರೆ. ಇವರು ನಿನ್ನೆ ತಡರಾತ್ರಿ 1.30ವ ರೇಳೆಯಲ್ಲಿ ತುಮಕೂರು ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಇಲ್ಲಿನ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮತ್ತೊಂದೆಡೆ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಈ ಘಟನೆಯು ಗುಬ್ಬಿ ತಾಲೂಕಿನ ಶಿವಸಂದ್ರ ಬಳಿ ನಡೆದಿದ್ದು, ಮೃತ ಯುವಕರು ತಿಪಟೂರು ಮೂಲದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಗುಬ್ಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.