ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್ ನೇಮಕ

ಮಂಗಳವಾರ, 17 ಜನವರಿ 2017 (17:08 IST)
ಎಚ್‌.ಎಸ್.ಮಹದೇವಪ್ರಸಾದ ಅಕಾಲಿಕ ನಿಧನದಿಂದ ತೆರುವಾಗಿದ್ದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಚಿವ ಯು.ಟಿ.ಖಾದರ್ ಅವರನ್ನು ನೇಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಆದೇಶ ಹೊರಡಿಸಿದ್ದಾರೆ. 
 
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿರುವ ಖಾಸಗಿ ರೆಸಾರ್ಟ‌್‌ನಲ್ಲಿ ತಂಗಿದ್ದ ಸಹಕಾರ-ಸಕ್ಕರೆ ಸಚಿವ ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರು ಜನವರಿ 3 ರಂದು ಹೃದಯಘಾತದಿಂದ ನಿಧನರಾಗಿದ್ದರು. 
 
ಸಚಿವರ ಅಕಾಲಿಕ ನಿಧನದಿಂದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸ್ಥಾನ ತೆರವುಗೊಂಡಿತ್ತು. ಇದೀಗ, ಈ ಸ್ಥಾನಕ್ಕೆ ಯು.ಟಿ.ಖಾದರ್ ಅವರನ್ನು ನೇಮಿಕ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.
 
ಈ ಹಿಂದೆ ಸಹಕಾರ-ಸಕ್ಕರೆ ಸಚಿವ ಸಚಿವ ಎಚ್.ಸಿ.ಮಹದೇವಪ್ರಸಾದ್ ಅವರಿಗೆ ಬೈಪಾಸ್ ಸರ್ಜರಿ ಆಗಿತ್ತು. ಆದರೆ, ದುರಾದೃಷ್ಟವಶಾತ್  ಹೃದಯಾಘಾತದಿಂದ ವಿಧಿವಶರಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ