ರಸ್ತೆ ಸಮಸ್ಯೆ ಬಗ್ಗೆ ಹೇಳಿದ ಗ್ರಾಮಸ್ಥನ ಮೇಲೆ ದರ್ಪ ತೋರಿದ ಸಂಸದ ಉದಾಸಿ

ಮಂಗಳವಾರ, 24 ನವೆಂಬರ್ 2020 (11:49 IST)
ಹಾವೇರಿ : ರಸ್ತೆ ಸಮಸ್ಯೆ ಬಗ್ಗೆ ಹೇಳಿದ ಗ್ರಾಮಸ್ಥನ ಮೇಲೆ ಸಂಸದ ಶಿವಕುಮಾರ್ ಉದಾಸಿ ದರ್ಪ ತೋರಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನ.20ರಂದು ಈ ಘಟನೆ ನಡೆದಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಗೆಯ ವೇಳೆ ಕಾಮಗಾರಿಗೆ ಚಾಲನೆ ನೀಡಲು ಶಿವಕುಮಾರ್ ಉದಾಸಿ ಆಗಮಿಸಿದ್ದರು. ಆ ವೇಳೆ ಗ್ರಾಮಸ್ಥನೊಬ್ಬ  ತಮ್ಮ ಗ್ರಾಮದ ರಸ್ತೆ ಸಮಸ್ಯೆ ಬಗ್ಗೆ ಬಿಜೆಪಿ ಮುಖಂಡನ ಬಳಿ ಮಾತನಾಡುತ್ತಿದ್ದ.

ಆಗ ಮಧ್ಯ ಪ್ರವೇಶಿಸಿದ ಸಂಸದ ಶಿವಕುಮಾರ್ ಉದಾಸಿ ಗ್ರಾಮಸ್ಥನ ಮೇಲೆ ದರ್ಪ ತೋರಿ ಎಡಗೈಯಿಂದ ನೂಕಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ