ಚಿಂಚೋಳಿ ಕ್ಷೇತ್ರದ ಎಲೆಕ್ಷನ್‍ಗೆ ಪ್ರಿಯಾಂಕ್ ಖರ್ಗೆ ನಿಂತು ಗೆಲುವು ಸಾಧಿಸಿ ತೋರಿಸಲಿ- ಪ್ರಿಯಾಂಕ್ ಖರ್ಗೆಗೆ ಉಮೇಶ್ ಜಾಧವ್ ಸವಾಲು

ಬುಧವಾರ, 13 ಮಾರ್ಚ್ 2019 (12:24 IST)
ಕಲಬುರಗಿ : ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಬಹಿರಂಗವಾಗಿ ಸವಾಲ್ ವೊಂದನ್ನು ಹಾಕಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ತಾಕತ್ತಿದ್ದರೆ ಮುಂಬರುವ ಚಿಂಚೋಳಿ ಬೈ ಎಲೆಕ್ಷನ್‍ಗೆ ಪ್ರಿಯಾಂಕ್ ಖರ್ಗೆ ನಿಂತು ಗೆಲುವು ಸಾಧಿಸಿ ತೋರಿಸಲಿ ಎಂದು ಶಾಸಕ ಉಮೇಶ್ ಜಾಧವ್ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ.
ಅಲ್ಲದೇ ದತ್ತು ಪುತ್ರನಾಗಿ ಚಿಂಚೋಳಿಗೆ ಬರಲು ಸಿದ್ಧವೆಂಬ ಸಚಿವ ಪ್ರೀಯಾಂಕ್ ಖರ್ಗೆ ಹೇಳಿಕೆ ವಿಚಾರ ಪ್ರತಿಕ್ರಿಯಿಸಿದ ಅವರು ದತ್ತು ಪುತ್ರನಾಗಿ ಬರುವ ಬದಲು ರಾಜನಾಗಿ ಬರಲಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಸೋಲಿಸಲಿ, ಒಂದು ಕೈ ನೋಡಿಯೇ ಬಿಡೋಣ ಎಂದು ಚಾಲೆಂಜ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ