ಸಿಎಂ ನಿವಾಸದಿಂದ ಸಿಟ್ಟಿನಿಂದ ಹೊರಬಂದ ಉಮೇಶ್ ಕತ್ತಿ

ಶನಿವಾರ, 24 ಆಗಸ್ಟ್ 2019 (12:58 IST)
ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಹಿರಿಯ ಶಾಸಕ ಉಮೇಶ್‌ ಕತ್ತಿ, ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಎದುರೇ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.




ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಸಿಗದಿರುವ ಕುರಿತು ತೀವ್ರವಾಗಿ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಉಮೇಶ್‌ ಕತ್ತಿ ಹಾಗೂ ಸಚಿವ ಲಕ್ಷ್ಮಣ ಸವದಿಯವರನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ  ನಿವಾಸಕ್ಕೆ ಕರೆಸಿಕೊಂಡಿದ್ದರು.


ಆದರೆ ಆ ವೇಳೆ ಭೇಟಿ ನೀಡಿದ ಉಮೇಶ್ ಕತ್ತಿ, ಸಚಿವ ಲಕ್ಷ್ಮಣ ಸವದಿಯವರ ವಿರುದ್ದ ಕೂಗಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಟ್ಟಿನಿಂದಲೇ ಹೊರ ಬಂದ ಉಮೇಶ್‌ ಕತ್ತಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ