ಉಮೇಶಕತ್ತಿ ಅವರ ಜೊತೆ ರಾಜಕೀಯದ ಬಗ್ಗೆ ಚರ್ಚಿಸಿಲ್ಲ- ಸಿಎಂ

ಶನಿವಾರ, 9 ಡಿಸೆಂಬರ್ 2017 (20:14 IST)
ಉಮೇಶಕತ್ತಿ ನನಗೆ ಒಳ್ಳೆಯ ಸ್ನೇಹಿತರು. ಹಾಗಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ. ಆದರೆ, ರಾಜಕೀಯ ವಿಷಯ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ಉಮೇಶಕತ್ತಿ ಅವರು ಕಾಂಗ್ರೆಸ್‍ಗೆ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಉಮೇಶ ಕತ್ತಿ ಅವರ ಜೊತೆ ದೂರವಾಣಿಯಲ್ಲಿ ಮಾತನಾಡುತ್ತೇನೆ. ಹಾಗೆಂದ ಮಾತ್ರಕ್ಕೆ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ ಎಂದೇನಿಲ್ಲ ಎಂದಿದ್ದಾರೆ.
 
ಇದೇ ವೇಳೆ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ