ರಮೇಶ್ ಜಾರಕಿಹೊಳಿಯಿಂದ ಮತ್ತೆ ಮುಂಬೈ ಪಾಲಿಟಿಕ್ಸ್

ಸೋಮವಾರ, 21 ಜೂನ್ 2021 (10:42 IST)
ಬೆಳಗಾವಿ: ರಾಸಲೀಲೆ ಪ್ರಕರಣದಲ್ಲಿ ತಮ್ಮನ್ನು ಯಾರೂ ಬೆಂಬಲಿಸದೇ ಇರುವ ಕಾರಣಕ್ಕೆ ಮತ್ತು ಮತ್ತೆ ತಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಾರೂ ಪರಿಗಣಿಸದೇ ಇರುವುದಕ್ಕೆ ನೊಂದಿರುವ ಶಾಸಕ ರಮೇಶ್ ಜಾರಕಿಹೊಳಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗಿದೆ.

 

ಕಳೆದ ಬಾರಿ ಮುಂಬೈಗೆ ತೆರಳಿ ತಮ್ಮ ಆಪ್ತ ಶಾಸಕರನ್ನು ಕರೆಸಿಕೊಂಡು ರಾಜೀನಾಮೆ ಕೊಡಿಸುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಲು ಅವರೇ ಪ್ರಮುಖ ಕಾರಣರಾಗಿದ್ದರು. ಇದೀಗ ಮತ್ತೆ ಅಸಮಾಧಾನಗೊಂಡು ಮುಂಬೈಗೆ ತೆರಳಿದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ತಮ್ಮ ವಿರುದ್ಧ ಬಂದಿರುವ ಪ್ರಕರಣ ರದ್ದುಗೊಳಿಸಲು ರಾಜ್ಯ ಸರ್ಕಾರ ಪ್ರಯತ್ನಪಡುತ್ತಿಲ್ಲ. ಅಲ್ಲದೆ, ತಮಗೆ ಮತ್ತೆ ಸಚಿವ ಸ್ಥಾನ ಕೊಡುವ ಬಗ್ಗೆಯೂ ಆಸಕ್ತಿ ತೋರುತ್ತಿಲ್ಲ ಎನ್ನುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ