ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನವಿದೆ: ಶಾಸಕ ಮಲಕರೆಡ್ಡಿ

ಶನಿವಾರ, 11 ನವೆಂಬರ್ 2017 (13:56 IST)
ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನವಿದೆ. ಆದರೆ. ಪಕ್ಷ ಬಿಡುವ ವರದಿಗಳು ಉಹಾಪೋಹ ಎಂದು ಮಾಜಿ ಸಚಿವ ಡಾ.ಎ.ಬಿ.ಮಲಕರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಲವತ್ತು ವರ್ಷಗಳ ಸುದೀರ್ಘ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಸೇವೆ ಸಲ್ಲಿಸಿದ್ದೇನೆ. ಇದೀಗ ಬೇರೆ ಪಕ್ಷ ಸೇರಿ ಸಾಧಿಸುವುದೇನಿದೆ ಎಂದು ಬಿಜೆಪಿ ಪಕ್ಷ ಸೇರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ತಪ್ಪುಗಳನ್ನು ತಿದ್ದುಕೊಂಡು ಹೋಗುವ ಮನಸ್ಥಿತಿ ಇಲ್ಲವಾಗಿದೆ. ಸ್ವಾರ್ಥತನ ಹೆಚ್ಚಾಗಿದೆ. ಯಾರೇ ಆಗಲಿ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
 
ನಾನು ಜೆಡಿಎಸ್ ಪಕ್ಷ ಸೇರುತ್ತೇನೆ ಎನ್ನುವ ವದಂತಿಗಳು ಹರಡಿವೆ. ಇದು ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಮುಂದೆ ಕಾಂಗ್ರೆಸ್ ಪಕ್ಷ ಬಿಡಬಹುದು. ಆದರೆ. ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಸಚಿವ ಡಾ.ಎ.ಬಿ.ಮಲಕರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ