ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ

ಶನಿವಾರ, 3 ಫೆಬ್ರವರಿ 2018 (10:25 IST)

ಬಿಜೆಪಿ ಮಾಜಿ ಶಾಸಕ ಆನಂದಸಿಂಗ್ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ.

ಹೊಸಪೇಟೆಯಲ್ಲಿ ಫೆಬ್ರುವರಿ 10ರಂದು ನಡೆಯುವ ಕಾಂಗ್ರೆಸ್ ಎಸ್ಟಿ ಸಮಾವೇಶದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಆನಂದಸಿಂಗ್ ಪಕ್ಷ ಸೇರ್ಪಡೆ ವಿಷಯ ಪ್ರಸ್ತಾಪವಾಗಿದ್ದು, ಸಚಿವ ಸಂತೋಷ ಲಾಡ್ ಅವರನ್ನು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ, ಇಷ್ಟ ಬಂದಂತೆ ನಡೆದುಕೊಳ್ಳಲಾಗುತ್ತಿದೆ. ಆನಂದ ಸಿಂಗ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಯಾರನ್ನು ಕೇಳಿದ್ದೀರಿ ಎಂದಿದ್ದಾರೆ.

ಸಚಿವ ಸಂತೋಷಲಾಡ್ ಮಾತನಾಡಿ, ಹೈಕಮಾಂಡ್ ತೀರ್ಮಾನವಾಗಿದ್ದು, ಹೈಕಮಾಂಡನ್ನು ಕೇಳಿ. ರಾಜಕೀಯದಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಸಹಜ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ