ಜನರಿಗೆ ಬೇಕಾದ ಆರೋಗ್ಯ, ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಕೊಡಿಸುವುದೇ ನಮ್ಮ ಗುರಿಯಾಗಿರುತ್ತದೆ. ನಮ್ಮ ಪ್ರಣಾಳಿಕೆ, ಅಭ್ಯರ್ಥಿಗಳು ಎಲ್ಲರೂ ರೆಡಿ ಇದ್ದಾರೆ. ಈ ಚುನಾವಣೆಯಲ್ಲೇ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸುತ್ತೇವೆ ಎಂದು ಉಪೇಂದ್ರ ಸ್ಪಷ್ಟವಾಗಿ ಹೇಳಿದ್ದಾರೆ.
ಏನಿದು ಪ್ರಜಾಕೀಯ? ರಾಜಕೀಯವಲ್ಲ ಅರ್ಥ ಮಾಡ್ಕೊಳ್ಳಿ..!
ದಯವಿಟ್ಟು ಅರ್ಥ ಮಾಡ್ಕೊಳ್ಳಿ.. ರಾಜಕೀಯ, ಪ್ರಜಾಕೀಯ ಬೇರೆ ಬೇರೆನೇ.. ಎಂದು ನಟ ಉಪೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
ಹಾಗಿದ್ದರೆ ಉಪೇಂದ್ರ ಹೇಳುವ ಪ್ರಜಾಕೀಯ ಎಂದರೇನು?
ಇಲ್ಲಿ ಪ್ರಜೆಗಳೇ ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ. ಜನ ನಾಯಕರಲ್ಲ. ಉದಾಹರಣೆಗೆ ಒಬ್ಬ ಪೊಲೀಸ್ ಅಧಿಕಾರಿ ವರ್ಗಾವಣೆ ಆಗಬೇಕು ಎಂದರೆ ಜನರೇ ನೇರವಾಗಿ ನಿರ್ಧರಿಸಬೇಕು. ಅವರಿಗೇ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರ ಇರಬೇಕು. ಇಲ್ಲಿ ಯಾರೂ ನಾಯಕರಿಲ್ಲ. ಜನ ಸಾಮಾನ್ಯರೇ ತಮಗೆ ಏನು ಬೇಕು ಎನ್ನುವುದನ್ನು ನಿರ್ಧರಿಸಬೇಕು.