ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ: ಶಿವಕುಮಾರ್

ಬುಧವಾರ, 11 ಜನವರಿ 2023 (13:03 IST)
ಬೆಳಗಾವಿ : ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪ್ರಜಾಧ್ವನಿ ಬಸ್ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬ್ರಿಟಿಷ್ರನ್ನು ಓಡಿಸಲು ಈ ನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಹೋರಾಡಿದ್ದರು. ಅದಾದ ಮೇಲೆ ಪ್ರಜಾಪ್ರಭುತ್ವ ಬಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ.

ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ. ಆ ಕಳಂಕ ನಿರ್ಮೂಲನೆ ಮಾಡಲು ಪ್ರಜೆಗಳ ಧ್ವನಿ ತಿಳಿಸಲು ಹೊರಟಿದ್ದೇವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ