ಎಂಇಎಸ್, ಶಿವಸೇನಾ ಪುಂಡಾಟ ವಿರುದ್ಧ ಕರ್ನಾಟಕ ಬಂದ್ಗೆ ವಾಟಾಳ್ ನಾಗರಾಜ್ ಕರೆ
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಇಲ್ಲಿ ನಾಡವಿರೋಧಿ ಚಟುವಟಿಕೆ ಕೈಗೊಳ್ಳುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಬೆಳಗಾವಿಯಲ್ಲಿನ ಮರಾಠಿ ನಾಮಫಲಕಗಳನ್ನು ತೆರವುಗೊಳಿಸಬೇಕು ಎಂದು ವಾಟಾಳ್ ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೆ ಕ್ರಮ ಕೈಗೊಳ್ಳಲಿಲ್ಲ. ಶೀಘ್ರವೇ ಎಂಇಎಸ್ ನಿಷೇಧ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.