ಪಕ್ಷದ ಸೋಲಿಗೆ ಕಾರಣ ತಿಳಿಸಿದ ವೀರಪ್ಪ ಮೊಯ್ಲಿ

ಮಂಗಳವಾರ, 15 ಮೇ 2018 (14:42 IST)
ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರುವ ಹಿನ್ನಲೆಯಲ್ಲಿ ಇದೀಗ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಈ ಬಗ್ಗೆ ಮಾತನಾಡಿದ ವೀರಪ್ಪ ಮೊಯ್ಲೆ ಅವರು,’ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಲಿಂಗಾಯತ ಧರ್ಮ ವಿಷಯವನ್ನು ಪ್ರಸ್ತಾಪಿಸಬಾರದಿತ್ತು. ತನ್ನ ಚುನಾವಣಾ ಕಾರ್ಯತಂತ್ರದಲ್ಲಿ ಪಕ್ಷವು ಜಾತಿ ಸಮೀಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲಿಲ್ಲ. ಇದು ಕಾಂಗ್ರೆಸ್ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷವು ಈಗ ಜಾತಿ ನಿರ್ವಹಣೆ ಬಗ್ಗೆ ಪುನರ್ ಅವಲೋಕನ ಮಾಡುವ ಅಗತ್ಯವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ