ನೈಸ್ ರಸ್ತೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಆಗಾಗ ಕೇಳಿ ಬರುತ್ತಲೇ ಇತ್ತು. ಈ ಹಿನ್ನೆಲೆಯಲ್ಲಿ ನೈಸ್ ಸಂಸ್ಥೆಯ ಕಾಮಗಾರಿಗಳ ಪರಿಶೀಲನೆಗಾಗಿ ಸರ್ಕಾರ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರ ನೇತೃತ್ವದಲ್ಲಿ ನೇಮಿಸಲಾಗಿದ್ದ ಸದನ ಸಮಿತಿಯು ಇಂದು ನಗರದ ಹಲವೆಡೆ ಭೇಟಿ ನೀಡಿ ನಿರ್ಮಾಣ ರಸ್ತೆಗಳನ್ನು ಪರಿಶೀಲಿಸಿತು. ಇದೇ ವೇಳೆ, ರಸ್ತೆ ನಿರ್ಮಾಣಕ್ಕಾಗಿ ಭೂಮಿಯನ್ನು ಒದಗಿಸಿದ್ದ ರೈತರು ತಮ್ಮ ಸಮಸ್ಯೆಗಳನ್ನು ಪತ್ರದ ಮುಖೇನ ಸಮಿತಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.